Pages

ಕೈಲಾಸವಾಸ ಗೌರೀಶ ಈಶ

Tuesday 1 March 2016

ಸಾಹಿತ್ಯ-ವಿಜಯದಾಸ


ಕೈಲಾಸವಾಸ ಗೌರೀಶ ಈಶ ।
ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ॥

ಅಹೋರಾತ್ರಿಯಲ್ಲಿ ನಾನು ಅನುಚರಾಗ್ರಣಿಯಾಗಿ
ಮಹಿಯೊಳಗೆ ಚರಿಸಿದೆನೋ ಮಹದೇವನೇ ।
ಅಹಿಭೂಶಣನೆ ಎನ್ನ ಅವಗುಣಗಳೆಣಿಸದಲೇ
ವಿಹಿತಧರ್ಮದಲಿಡು ವಿಷ್ಣುಭಕುತಿಯನು ಕೊಡು ಶಂಭೋ ॥೧॥

ಮನಸು ಕಾರಣವಲ್ಲ ಪಾಪಪುಣ್ಯಕ್ಕೆಲ್ಲ
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ ।
ಧನುಜಗತಮದಹಾರಿ ದಂಡಪ್ರಣಾಮವ ಮಾಡ್ಪೆ
ಮಣಿಸು ಈ ಶಿರವ ಸಜ್ಜನಚರಣಕಮಲದಲ್ಲಿ ಶಂಭೋ ॥೨॥

ಭಾಗೀರಥಿಧರನೆ ಭಯವ ಪರಿಹರಿಸಯ್ಯ
ಲೇಸಾಗಿ ನೀ ಸಲಹೊ ಸಂತತ ಸರ್ವದೇವ ।
ಭಾಗವತಗಳ ಪ್ರಿಯ ವಿಜಯವಿಠಲನಂಘ್ರಿ
ಜಾಡು ಮಾಡದೆ ಭಜಿಪ ಭಾಗ್ಯವನು ಕೊಡು ಶಂಭೋ ॥೩॥

0 comments:

Popular Posts